Image Source : Rajya Sabha Tv
ಭಾರತದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಸುಭಾಸ್ ಚಂದ್ರ ಬೋಸ್ ಒಬ್ಬರು. ನೇತಾಜಿ ಎಂದೇ ಪ್ರಸಿದ್ಧರಾದ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರ ವಹಿಸಿದರು. ಭಾರತವು ಸ್ವಾತಂತ್ರ್ಯ ಪಡೆಯಲು ಭಾರತಕ್ಕೆ ಸಹಾಯ ಮಾಡಿದ ಜರ್ಮನಿ, ಜಪಾನ್, ರಷ್ಯಾಗಳಂತಹ ದೇಶಗಳು ಬ್ರಿಟಿಷ್ ವಿರುದ್ಧ ಹೋರಾಡಲು ಮತ್ತು ಸ್ವಾತಂತ್ರ್ಯ ಪಡೆಯಲು ಬೋಸರಿಗೆ ಸಹಾಯ ಮಾಡಲು ಸಿದ್ಧವಾಗಿದ್ದವು. ಗಾಂಧಿಯವರು ಸ್ವಾತಂತ್ರ್ಯ ಪಡೆಯುವ ಬಗೆಗೆ ಅಹಿಂಸಾ ಮಾರ್ಗ ಅನುಸರಿಸಿದರೆ, ಬೋಸ್ ಸ್ವಾತಂತ್ರ್ಯಕ್ಕೆ ಸಶಸ್ತ್ರ ಹೋರಾಟವನ್ನೂ ಒಪ್ಪಿದ್ದರು.
1897ರ ಜನವರಿ 23ರಂದು ಒಡಿಶಾದ ಕಟಕ್ನಲ್ಲಿ ಸುಭಾಷ್ಚಂದ್ರ ಬೋಸ್ ಜನಿಸಿದರು. ತಂದೆ ಜಾನಕೀನಾಥ ಬೋಸ್, ತಾಯಿ ಪ್ರಭಾವತಿ. ಆ ದಂಪತಿಗಳ 14 ಜನ ಮಕ್ಕಳಲ್ಲಿ ಸುಭಾಷ್ 9ನೇ ಯವರು. ಕಟಕ್ನಲ್ಲಿ ಕೊಲಿಜಿಯೇಟ್ ಶಾಲೆಯಲ್ಲಿ ಪ್ರಾಥಮಿಕ ವ್ಯಾಸಂಗ, ಅಲ್ಲಿ ಮುಖ್ಯೋಪಾಧ್ಯಾಯ ಬೇಣಿಮಾಧವದಾಸ್ ರಿಂದ ಪ್ರೇರಣೆಗೊಂಡರು. 1919ರಲ್ಲಿ ತತ್ವಶಾಸ್ತ್ರ ವಿಭಾಗದಲ್ಲಿ ಬಿಎ ಪದವಿ, ನಂತರ 1920ರ ಸೆಪ್ಟಂಬರ್ನಲ್ಲಿ ನಾಲ್ಕನೇ ಸ್ಥಾನಿಗರಾಗಿ ಐ.ಸಿ.ಎಸ್ ಪದವಿ ಪ್ರಾಪ್ತಿಯಾಯಿತು. ಆದರೆ, ಸಿಕ್ಕಿದ ವಿದೇಶೀ ನೌಕರಿಯನ್ನೂ ಬೇಡವೆಂದು ತಿರಸ್ಕರಿಸಿದ್ದರು ಬೋಸ್.
ಸ್ವರಾಜ್ಯ ಹೋರಾಟಕ್ಕೆ ಬಲ ತುಂಬಿದ ಬೋಸ್
Image Source : wikipedia
ಇಂಗ್ಲೆಂಡ್ ವಾಸದ ನಂತರ ಮುಂಬಯಿಗೆ ಮರಳಿದ ಬೋಸ್ ಗಾಂಧೀಜಿಯವರನ್ನು ಭೇಟಿಯಾದರು. ನಂತರ ಚಿತ್ತರಂಜನ್ದಾಸ್ರ ಮಾರ್ಗದರ್ಶನದಲ್ಲಿ ಯುವಕರ ಸಂಘಟನೆಗೆ ಆದ್ಯತೆ ನೀಡಿದರು. ಆತ್ಮಾಭಿಮಾನದ ಸ್ವರಾಜ್ಯ ಹೋರಾಟಕ್ಕೆ ಬಲತುಂಬಿದವರು ಸುಭಾಷ್ ಚಂದ್ರ ಬೋಸ್.ಆಸ್ಟ್ರಿಯಾ, ಇಂಗ್ಲೆಂಡ್, ಜರ್ಮನಿ, ಜಪಾನ್ ಸೇರಿದಂತೆ ಹತ್ತಾರು ರಾಷ್ಟ್ರಗಳಲ್ಲಿ ಮಿಂಚಿನ ಓಡಾಟ ನಡೆಸಿ ಭಾರತೀಯ ಸ್ವರಾಜ್ಯ ಹೋರಾಟದ ದನಿಗೆ ತೀವ್ರತೆ ತುಂಬಿದ್ದರು. ತಾನು ನಂಬಿದ್ದ ಕ್ರಾಂತಿಪಥದಲ್ಲಿ ಎಂದೂ ರಾಜಿಮಾಡಿದವರಲ್ಲ.
ಶೀಘ್ರ ಸ್ವಾತಂತ್ರ್ಯಪ್ರಾಪ್ತಿಗಾಗಿ ಅವರು ಮಂಡಿಸುತ್ತಿದ್ದ ವಾದಗಳು, ಅದಕ್ಕಾಗಿ ಶ್ರಮಿಸಬೇಕಾದ ತ್ವರಿತ ಸಿದ್ಧತೆಗಳ ಕುರಿತು ಬೋಸ್ರ ನಿಲುವುಗಳೆಲ್ಲ ಕಾಂಗ್ರೆಸ್ನ ಗುಂಪಿಗೆ ಅಸಹನೀಯವಾಗಿತ್ತು. ಸ್ವತಃ ಗಾಂಧೀಯವರೇ ಹಲವು ಬಾರಿ ಬೋಸ್ರನ್ನು ಟೀಕಿಸಿದ್ದರು.ಕಾಂಗ್ರೆಸ್ನ ಡೋಲಾಯಮಾನ ನೀತಿಗಳಿಗೆ ಬೇಸತ್ತ ಚಿತ್ತರಂಜನ್ದಾಸ್ ಸ್ವರಾಜ್ಯಪಕ್ಷ ಸ್ಥಾಪಿಸಿದ್ದು, ಬೋಸ್ ಇದರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ನಂತರ ಹತ್ತಾರು ಚಳುವಳಿಗೆ ನೇತೃತ್ವ ವಹಿಸಿದರು.. ಇಂಗ್ಲೆಂಡ್, ಆಸ್ಟ್ರಿಯಾ, ಇಟೆಲಿ ವಿಯೆನ್ನಾಗಳ ಭೇಟಿ, ತ್ವರಿತಗತಿಯ ಪ್ರವಾಸ, ಮಿಂಚಿನ ಓಡಾಟ. ಸ್ವಿಟ್ಜರ್ಲೆಂಡ್, ಚೆಕೋಸ್ಲೋವಾಕಿಯಾ, ಪೋಲೆಂಡ್, ಜರ್ಮನಿಗಳಲ್ಲಿ ಭಾರತದ ಪರ ಪ್ರಚಾರ ನಡೆಸಿದರು. ಇಟೆಲಿ ಪ್ರಧಾನಿ ಬೆನಿತೋ ಮುಸ್ಸೋಲಿನಿ ಜತೆ ಚರ್ಚೆ ನಡೆಸಿ 1936ರ ಏಪ್ರಿಲ್ 8ರಂದು ಮರಳಿ ಭಾರತಕ್ಕೆ, ಬಂದರಲ್ಲೇ ಅವರನ್ನು ಬಂಧಿಸಲಾಯಿತು.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಅಧ್ಯಕ್ಷರಾಗಿ ಸತತ ಎರಡು ಬಾರಿ ಕಾರ್ಯ ನಿರ್ವಹಿಸಿದ ಇವರು, ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ತತ್ವಗಳನ್ನು ಒಪ್ಪದೆ ಪಕ್ಷದಿಂದ ಹೊರಬಂದರು. ಮುಂದೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ನೇತಾಜಿಯವರು ಭಾರತೀಯ ರಾಷ್ಟ್ರೀಯ ಸೇನೆಯನ್ನು ಸ್ಥಾಪಿಸಿದರು. ‘ನೀವು ನಿಮ್ಮ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ತಂದು ಕೊಡುತ್ತೇನೆ. ಸ್ವಾತಂತ್ರ್ಯವೆಂಬುದು ಯಾರೂ ಕೊಡುವಂಥ ಸರಕಲ್ಲ ಅದು ನಾವು ಪಡೆದುಕೊಳ್ಳಬೇಕಾದದ್ದು’ ಎಂದು ಸುಭಾಷ್ ಚಂದ್ರ ಬೋಸ್ ಆಗಾಗ ಹೇಳುತ್ತಿದ್ದರು.
ವಿಮಾನ ಅಪಘಾತದಲ್ಲಿ ನೇತಾಜಿ ಸಾವು..?
Image Source : Times Of India
ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದ ಬೋಸ್, ಟೈವಾನ್ನಲ್ಲಿ 1945ರ ಆಗಸ್ಟ್ 18ರಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಜಪಾನ್ ಸರ್ಕಾರ ಬಿಡುಗಡೆ ಮಾಡಿರುವ ವರದಿ ತಿಳಿಸಿತ್ತು. ಬೋಸ್ ಅವರ ಸಾವಿನ ಕುರಿತ 60 ವರ್ಷದ ಹಳೆಯ ವರ್ಗೀಕೃತ ದಾಖಲೆಗಳನ್ನು ಜಪಾನ್ ಸರ್ಕಾರ ಸಾರ್ವಜನಿಕವಾಗಿ ಬಹಿರಂಗಪಡಿಸಿತ್ತು. ಸುಭಾಷ್ ಸಾವಿನ ಕುರಿತ ದಾಖಲೆಗಳಿಗಾಗಿಯೇ ರೂಪಿಸಲಾಗಿರುವ ‘ಬೋಸ್ಫೈಲ್ಸ್.ಇನ್ಫೊ’ ವೆಬ್ಸೈಟ್ನಲ್ಲಿ ಮೊದಲ ಬಾರಿ ಈ ದಾಖಲೆಗಳನ್ನು ಉಲ್ಲೇಖಿಸಿ ವರದಿ ಪ್ರಕಟಿಸಲಾಗಿತ್ತು.
1945ರ ಆಗಸ್ಟ್ 18ರಂದು ಬೋಸ್ ಅವರಿದ್ದ ವಿಮಾನ ಅಪಘಾತಕ್ಕೀಡಾಯಿತು. ಅದೇ ದಿನ ಸಂಜೆ ತೈಪೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಬೋಸ್ ಅವರು ಪ್ರಯಾಣಿಸುತ್ತಿದ್ದ ವಿಮಾನ, ಹಾರಾಟ ಆರಂಭಿಸಿದ ತಕ್ಷಣ ನೆಲಕ್ಕೆ ಅಪ್ಪಳಿಸಿತು. ಆಗ ಬೋಸ್ ಅವರು ತೀವ್ರ ಗಾಯಗೊಂಡರು. ಮಧ್ಯಾಹ್ನ 3 ಗಂಟೆಗೆ ತೈಪೆಯ ಸೇನಾ ಆಸ್ಪತ್ರೆಗೆ ಬೋಸ್ ಅವರನ್ನು ದಾಖಲಿಸಲಾಯಿತು. ಬಳಿಕ 7 ಗಂಟೆಗೆ ಅವರು ಮೃತಪಟ್ಟರು. ಆಗಸ್ಟ್ 22ರಂದು ಬೋಸ್ ಅವರ ಅಂತ್ಯಕ್ರಿಯೆ ನಡೆಸಲಾಯಿತು’ ಎಂದು ಅದರಲ್ಲಿ ಹೇಳಲಾಗಿತ್ತು. ಆದರೆ ಈ ಘಟನೆಯ ಸತ್ಯಾಸತ್ಯತೆ ಮಾತ್ರ ಇಂದಿಗೂ ಪ್ರಶ್ನೆಯಾಗಿಯೇ ಉಳಿದಿದೆ.
ಸುರಕ್ಷಿತ ಸ್ಥಳ ಸೇರಿಕೊಂಡಿದ್ದರಾ ನೇತಾಜಿ..?
Image Source : Kalinga Tv
ಆಗಸ್ಟ್ 18, 1945 ರಂದು ಫಾರ್ಮೋಸಾದಲ್ಲಿ ವಿಮಾನ ಅಪಘಾತದಲ್ಲಿ ಅವರು ಸಾಯಲಿಲ್ಲ ಎಂದು ಇನ್ನೂ ಅನೇಕರು ನಂಬುತ್ತಾರೆ. ಒಂದು ಸಿದ್ಧಾಂತವೆಂದರೆ, ಇದು ನೇತಾಜಿ ಸ್ವತಃ ಸ್ಥಾಪಿಸಿದ ತಂತ್ರವಾಗಿದ್ದು, ಮಿತ್ರಪಕ್ಷಗಳನ್ನು ಮೋಸಗೊಳಿಸಲು ಮತ್ತು ಅವರ ಹೋರಾಟವನ್ನು ಮುಂದುವರಿಸಲು ಸುರಕ್ಷಿತ ಸ್ಥಳವನ್ನು ತಲುಪಲು ಅವರು ಹೀಗೆ ಮಾಡಿದ್ದರು ಎಂದು ಹೇಳುತ್ತಾರೆ.
ನೇತಾಜಿ ಏಕಾಂತದಲ್ಲಿದ್ದರು ಮತ್ತು ಉತ್ತರ ಭಾರತದಲ್ಲಿ ನೆಲೆಸಿದರು ಎಂಬ ಮಾತೂ ಕೇಳಿ ಬಂದಿತ್ತು. ನೆಹರೂ ಮತ್ತು ಗಾಂಧಿ ದ್ರೋಹ ಬಗೆದು ನೇತಾಜಿಯನ್ನು ಸೋವಿಯತ್ ಗುಲಾಗ್ನಲ್ಲಿ ಬಂಧಿಸಲ್ಪಟ್ಟರು ಎಂಬ ವಾದವೂ ಇದೆ. ಒಟ್ಟಾರೆ ಮಹಾನ್ ಸ್ವಾತಂತ್ರ್ಯ ಹೋರಾಟಗಾರನ ಸಾವು ಇಂದಿಗೂ ಬಗೆಹರಿಯದ ನಿಗೂಢ ರಹಸ್ಯವಾಗಿ ಉಳಿದಿರುವುದಂತೂ ನಿಜ.
ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮನ್ನು ಫಾಲೋ ಮಾಡಿ
►Subscribe to Planet Tv Kannada
►Follow us on Facebook
https://www.facebook.com/Planettvkannada
►Follow us on Blogspot
https://planettvkannada.blogspot.com
►Follow us on Dailymotion
https://www.dailymotion.com/planettvkannada
►Follow us on Instagram
https://www.instagram.com/planettvkannada/
►Follow us on Pinterest
https://in.pinterest.com/Planettvkannada/
►Follow us on Koo App
https://www.kooapp.com/profile/planettvkannada
►Follow us on Twitter
https://twitter.com/Planettvkannada
►Follow us on Share Chat
https://sharechat.com/profile/planettvkannada
►Follow us on Tumgir
https://www.tumgir.com/planettvkannada
►Follow us on Tumbler
https://planettvkannada.tumblr.com/
►Follow us on Telegram
from Planet Tv https://ift.tt/3f8GjTX
July 29, 2021 at 02:49PM